ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm