ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
16-04-25 06:42 pm
Bangalore Correspondent
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 08:22 pm
Mangalore Correspondent
Asif Apatbandava, Rauf Bengre Honey Trap, Man...
16-04-25 02:02 pm
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm