ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm