ಬ್ರೇಕಿಂಗ್ ನ್ಯೂಸ್
28-09-21 07:05 pm Source ; One India Kannada ಉದ್ಯೋಗ
ರಾಮನಗರ, ಸೆಪ್ಟೆಂಬರ್ 28: ರಾಮನಗರ ಜಿಲ್ಲೆಯಲ್ಲಿ 9 ಗೃಹರಕ್ಷಕದಳ ಘಟಕಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಒಟ್ಟು 700 ಗೃಹರಕ್ಷಕರ ಸಂಖ್ಯಾಬಲವನ್ನು ಹೊಂದಿದೆ. ಪ್ರಸ್ತುತ ವಿವಿಧ ಘಟಕದಲ್ಲಿ ಖಾಲಿ ಇರುವ 220 ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ ಮತ್ತು ಕುದೂರು, ಕೋಡಿಹಳ್ಳಿ ಹಾಗೂ ಅಕ್ಕೂರು ಗೃಹರಕ್ಷಕದಳ ಘಟಕಗಳು ಕಾರ್ಯ ನಿರ್ವಹಿಸುತ್ತಿದೆ.
ಈಗ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ, ಕುದೂರು, ಕೋಡಿಹಳ್ಳಿ, ಅಕ್ಕೂರು ಘಟಕಗಳಲ್ಲಿ ಖಾಲಿ ಇರುವ 220 ಸ್ಥಾನಗಳನ್ನು ತುಂಬಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಸೆಪ್ಟಂಬರ್ 27 ರಿಂದ ಅಕ್ಟೊಬರ್ 26ರ ತನಕ ವಿತರಣೆ ಮಾಡಲಾಗುತ್ತದೆ.

ಅಭ್ಯರ್ಥಿಗಳಿಗೆ ಅರ್ಹತೆಗಳು; ಗೃಹರಕ್ಷಕದಳಕ್ಕೆ ಸೇರಲು 10ನೇ ತರಗತಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 19 ರಿಂದ 30 ವರ್ಷಗಳು. ಮಹಿಳೆಯರೂ ಸಹ ಗೃಹರಕ್ಷಕರಾಗಿ ಕಾರ್ಯ ನಿರ್ವಹಣೆ ಮಾಡಬಹುದಾಗಿದೆ.
ಸ್ವಯಂ ಸೇವೆ ಮಾಡಲಿಚ್ಚಿಸುವವರು, ಯಾವುದೇ ವೃತ್ತಿಯಲ್ಲಿರುವವರು, ಸರ್ಕಾರಿ ನೌಕರರು ಅರ್ಜಿ ಸಲ್ಲಿಸಬಹುದಾಗಿದೆ. ಗೃಹರಕ್ಷರಿಗೆ ಕರ್ತವ್ಯಗಳ ಸಮಯದಲ್ಲಿ ಮತ್ತು ವಾರದ ಕವಾಯತುಗಳ ಹಾಜರಿಗೆ ಗೌರವಧನ ನೀಡಲಾಗುತ್ತದೆ. ಗೃಹರಕ್ಷಕ ಸದಸ್ಯತ್ವವನ್ನು ಬಯಸುವ ಗೃಹರಕ್ಷಕರು ಕಂಪ್ಯೂಟರ್, ವಾಹನ ಚಾಲನೆ ತಿಳಿದಿದ್ದರೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಆಯ್ಕೆಯಾದ ಗೃಹರಕ್ಷಕರಿಗೆ ಸ್ಥಳೀಯ ಮಟ್ಟದಲ್ಲಿಯೇ 10 ದಿನಗಳ ಮೂಲ ತರಬೇತಿಯನ್ನು ನೀಡಲಾಗುತ್ತದೆ. ಹೆಚ್ಚಿನ ತರಬೇತಿಗೆ ಬೆಂಗಳೂರಿನಲ್ಲಿರುವ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನೀಡುವ ವಿಪತ್ತು ನಿರ್ವಹಣೆ, ನಿಸ್ತಂತು ಚಾಲನಾ ತರಬೇತಿ, ಲಘು ಮತ್ತು ಪ್ರವಾಹ ರಕ್ಷಣೆ, ಪ್ರಥಮ ಚಿಕಿತ್ಸೆ ಮುಂದಾಳತ್ವ ತರಬೇತಿ ಅಗ್ನಿಶಮನ ತರಬೇತಿ ವಿವಿಧ ತರಬೇತಿಗಳಿಗೆ ನಿಯೋಜಿಸಲಾಗುತ್ತದೆ.
ಈ ಸಂದರ್ಭದಲ್ಲಿ ಆಗುವ ಪ್ರಯಾಣ ವೆಚ್ಚ ಹಾಗೂ ತರಬೇತಿ ಭತ್ಯೆಗಳನ್ನು ಗೃಹರಕ್ಷಕದಳ ಸಂಸ್ಥೆಯಿಂದ ಭರಿಸಲಾಗುತ್ತದೆ. ಕರ್ತವ್ಯದ ಸಮಯದಲ್ಲಿ ವಾರದ ಕವಾಯತುಗಳ ಹಾಜರಿಗೆ ಗೌರವಧನ ನೀಡಲಾಗುತ್ತದೆ ಅದಕ್ಕಾಗಿ ಕಡ್ಡಾಯವಾಗಿ ಯಾವುದೇ ಶಾಖೆಯ ಕೆನರಾ ಬ್ಯಾಂಕ್ನಲ್ಲಿ ಉಳಿತಾಯ ಖಾತೆ ಹೊಂದಿರಬೇಕು.
ಆಸಕ್ತರು ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಸಲ್ಲಿಕೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 080-27272265 ಕರೆ ಮಾಡಬಹುದಾಗಿದೆ. ಇಲ್ಲವೇ ಜಿಲ್ಲಾ ಗೃಹರಕ್ಷಕದಳ ಕಛೇರಿ, ಹನುಮಂತನಗರ, ಜಾಲಮಂಗಲ ರಸ್ತೆ, ಪಂಚಮುಖಿ ಆಂಜನೇಯ ದೇವಸ್ಥಾನದ ಪಕ್ಕ, ರಾಮನಗರ ಟೌನ್, ರಾಮನಗರ ಇಲ್ಲಿ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ.

ಅಪ್ರೆಂಟಿಸ್ ಮೇಳ; ರಾಮನಗರ ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಕ್ಟೋಬರ್ 4 ರಂದು ಅಪ್ರೆಂಟಿಸ್ ಮೇಳವನ್ನು ಬೆಳಗ್ಗೆ 10 ಗಂಟೆಗೆ ಆಯೋಜನೆ ಮಾಡಿದೆ.
ರಾಮನಗರದ ಹಳೆ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಪ್ರೆಂಟಿಸ್ ಮೇಲಳ ನಡೆಯಲಿದೆ. ಅಪ್ರೆಂಟಿಸ್ ಮೇಳದಲ್ಲಿ ಐಟಿಐ ತೇರ್ಗಡೆಯಾಗಿರುವ ಮತ್ತು ಎಸ್. ಎಸ್. ಎಲ್. ಸಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಬಳಿಕ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಮೇಳದಲ್ಲಿ ನೋಂದಣಿಯಾಗುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡುವ ಕಂಪನಿಗಳು, ಕೈಗಾರಿಕೆಗಳು ಸಹ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9448277634, 9900990375, 7760444044 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ರಾಮನಗರ ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಹೇಳಿದ್ದಾರೆ.
ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ; ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಮನಗರದ ಸರ್ಕಾರಿ ಮಹಿಳಾ ಪಾಲಿಟಕ್ನಿಕ್ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಕೆಲವೇ ಸೀಟುಗಳು ಬಾಕಿ ಉಳಿದಿವೆ. ಎಸ್. ಎಸ್. ಎಲ್. ಸಿ ವಿದ್ಯಾರ್ಹತೆಯ ಮೇಲೆ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.
Apply for 220 Home Guard post at Ramanagara district. Candidates can apply till October 26, 2021.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm