ಬ್ರೇಕಿಂಗ್ ನ್ಯೂಸ್
23-05-22 07:21 pm HK News Desk ಕರ್ನಾಟಕ
ಶಿವಮೊಗ್ಗ, ಮೇ 23 : ವಿದೇಶದಲ್ಲಿ ಕೆಲವೊಮ್ಮೆ ನಾಲ್ಕು ಮಕ್ಕಳು, ಆರು ಮಕ್ಕಳನ್ನು ಹೆತ್ತಿದ್ದು ಕೇಳಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾಳೆ.
ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್ ಎಂಬವರ ಪತ್ನಿ, 22 ವರ್ಷ ವಯಸ್ಸಿನ ಅಲ್ಮಾಜ್ ಬಾನು ಎಂಬಾಕೆ ಒಂದೇ ಹೆರಿಗೆಯಲ್ಲಿ ನಾಲ್ಕು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ಎರಡು ಗಂಡು ಮತ್ತು 2 ಹೆಣ್ಣು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದ ಪ್ರಕಾರ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಪ್ರಕರಣ ವಿರಳ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ 4 ಮಕ್ಕಳಿಗೆ ಜನ್ಮ ನೀಡುವುದು ಕಂಡುಬರುತ್ತದೆ ಎನ್ನುವ ಅಂಕಿ ಅಂಶಗಳಿವೆ. ಅವಳಿ - ಜವಳಿ, ತ್ರಿವಳಿ ಹೀಗೆ ಹೆಚ್ಚು ಮಕ್ಕಳಾಗುವುದಕ್ಕೆ ಅನುವಂಶೀಯ ಅಂಶಗಳೇ ಕಾರಣ ಎಂದು ಹೆರಿಗೆ ಮಾಡಿಸಿದ ಹಿರಿಯ ಪ್ರಸೂತಿ ತಜ್ಞೆ ಡಾ. ಚೇತನಾ ಎನ್. ತಿಳಿಸಿದ್ದಾರೆ.
ಅಂದಹಾಗೆ, ಅಲ್ಮಾಬಾನು ಹೊಟ್ಟೆಯಲ್ಲಿ ನಾಲ್ಕು ಮಕ್ಕಳನ್ನು ಹೊಂದಿರುವುದು ಸ್ಕ್ಯಾನಿಂಗ್ ವೇಳೆಯೇ ತಿಳಿದುಬಂದಿತ್ತು. ಹಾಗಾಗಿ ಆಕೆಯನ್ನು ವಿಶೇಷ ನಿಗಾ ವಹಿಸುವಂತೆ ವೈದ್ಯರು ಸೂಚಿಸಿದ್ದರು. ಸಾಮಾನ್ಯವಾಗಿ ಹೆಚ್ಚು ಮಕ್ಕಳಿದ್ದರೆ 28 ವಾರಕ್ಕೆ ಹೆರಿಗೆಯಾಗಿ ಮಕ್ಕಳು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಈಕೆ ಪೂರ್ತಿ 32 ವಾರಗಳ ಕಾಲ ಆರೋಗ್ಯವಾಗಿದ್ದು ಇಂದು ಬೆಳಗ್ಗೆ ಹೆರಿಗೆ ನೋವು ಬಂದು ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ನಾರ್ಮಲ್ ಹೆರಿಗೆಯಲ್ಲೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಮಕ್ಕಳು ಕೂಡ ಆರೋಗ್ಯದಲ್ಲಿದ್ದಾರೆ ಎಂದು ಹೆರಿಗೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಆರೋಗ್ಯಪೂರ್ಣ ಹೆರಿಗೆಯ ಕಾರಣಕ್ಕೆ ಸರ್ಜಿ ಆಸ್ಪತ್ರೆಯ ವೈದ್ಯರ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Arif's wife, 22-year-old Almaj Banu, from Tadasa village in Bhadravathi taluk, has given birth to 4 children. Four children have been born at the Sarji hospital in Shimoga town at 7.30 am on Monday . The hospital staff said that the mother and mother of 2 children and 2 girls were in good health.According to the medical field, giving birth to 4 children together is very rare. Only one in 5.12 lakh people is expected to give birth to 4 children.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm