ಬ್ರೇಕಿಂಗ್ ನ್ಯೂಸ್
23-05-22 07:21 pm HK News Desk ಕರ್ನಾಟಕ
ಶಿವಮೊಗ್ಗ, ಮೇ 23 : ವಿದೇಶದಲ್ಲಿ ಕೆಲವೊಮ್ಮೆ ನಾಲ್ಕು ಮಕ್ಕಳು, ಆರು ಮಕ್ಕಳನ್ನು ಹೆತ್ತಿದ್ದು ಕೇಳಿದ್ದೇವೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿ ಸುದ್ದಿಯಾಗಿದ್ದಾಳೆ.
ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್ ಎಂಬವರ ಪತ್ನಿ, 22 ವರ್ಷ ವಯಸ್ಸಿನ ಅಲ್ಮಾಜ್ ಬಾನು ಎಂಬಾಕೆ ಒಂದೇ ಹೆರಿಗೆಯಲ್ಲಿ ನಾಲ್ಕು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಹೆರಿಗೆಯಾದ ಎರಡು ಗಂಡು ಮತ್ತು 2 ಹೆಣ್ಣು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ವೈದ್ಯಕೀಯ ಕ್ಷೇತ್ರದ ಪ್ರಕಾರ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಪ್ರಕರಣ ವಿರಳ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ 4 ಮಕ್ಕಳಿಗೆ ಜನ್ಮ ನೀಡುವುದು ಕಂಡುಬರುತ್ತದೆ ಎನ್ನುವ ಅಂಕಿ ಅಂಶಗಳಿವೆ. ಅವಳಿ - ಜವಳಿ, ತ್ರಿವಳಿ ಹೀಗೆ ಹೆಚ್ಚು ಮಕ್ಕಳಾಗುವುದಕ್ಕೆ ಅನುವಂಶೀಯ ಅಂಶಗಳೇ ಕಾರಣ ಎಂದು ಹೆರಿಗೆ ಮಾಡಿಸಿದ ಹಿರಿಯ ಪ್ರಸೂತಿ ತಜ್ಞೆ ಡಾ. ಚೇತನಾ ಎನ್. ತಿಳಿಸಿದ್ದಾರೆ.
ಅಂದಹಾಗೆ, ಅಲ್ಮಾಬಾನು ಹೊಟ್ಟೆಯಲ್ಲಿ ನಾಲ್ಕು ಮಕ್ಕಳನ್ನು ಹೊಂದಿರುವುದು ಸ್ಕ್ಯಾನಿಂಗ್ ವೇಳೆಯೇ ತಿಳಿದುಬಂದಿತ್ತು. ಹಾಗಾಗಿ ಆಕೆಯನ್ನು ವಿಶೇಷ ನಿಗಾ ವಹಿಸುವಂತೆ ವೈದ್ಯರು ಸೂಚಿಸಿದ್ದರು. ಸಾಮಾನ್ಯವಾಗಿ ಹೆಚ್ಚು ಮಕ್ಕಳಿದ್ದರೆ 28 ವಾರಕ್ಕೆ ಹೆರಿಗೆಯಾಗಿ ಮಕ್ಕಳು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಈಕೆ ಪೂರ್ತಿ 32 ವಾರಗಳ ಕಾಲ ಆರೋಗ್ಯವಾಗಿದ್ದು ಇಂದು ಬೆಳಗ್ಗೆ ಹೆರಿಗೆ ನೋವು ಬಂದು ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ನಾರ್ಮಲ್ ಹೆರಿಗೆಯಲ್ಲೇ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಇದರಿಂದಾಗಿ ಮಕ್ಕಳು ಕೂಡ ಆರೋಗ್ಯದಲ್ಲಿದ್ದಾರೆ ಎಂದು ಹೆರಿಗೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಆರೋಗ್ಯಪೂರ್ಣ ಹೆರಿಗೆಯ ಕಾರಣಕ್ಕೆ ಸರ್ಜಿ ಆಸ್ಪತ್ರೆಯ ವೈದ್ಯರ ಬಗ್ಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Arif's wife, 22-year-old Almaj Banu, from Tadasa village in Bhadravathi taluk, has given birth to 4 children. Four children have been born at the Sarji hospital in Shimoga town at 7.30 am on Monday . The hospital staff said that the mother and mother of 2 children and 2 girls were in good health.According to the medical field, giving birth to 4 children together is very rare. Only one in 5.12 lakh people is expected to give birth to 4 children.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm