ವಿಧಾನ ಪರಿಷತ್ತಿಗೆ ಕಾಂಗ್ರೆಸಿನಿಂದ ಅಚ್ಚರಿಯ ಅಭ್ಯರ್ಥಿ ;  ಸಿದ್ದರಾಮಯ್ಯ ಬಣಕ್ಕೆ ಮೇಲುಗೈ ! 

23-05-22 10:24 pm       Bengalore Correspondent   ಕರ್ನಾಟಕ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ರೇಸಲ್ಲೇ ಇಲ್ಲದ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆಮೂಲಕ ಬಣ ರಾಜಕೀಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಟಾಂಗ್ ನೀಡಿದೆ.‌

ಬೆಂಗಳೂರು, ಮೇ 23 : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ರೇಸಲ್ಲೇ ಇಲ್ಲದ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆಮೂಲಕ ಬಣ ರಾಜಕೀಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಟಾಂಗ್ ನೀಡಿದೆ.‌

ಕೆ. ಅಬ್ದುಲ್ ಜಬ್ಬಾರ್ ಮತ್ತು ನಾಗರಾಜ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದ್ದು ಇವರಿಬ್ಬರೂ ಸಿದ್ದರಾಮಯ್ಯ ಬೆಂಬಲಿಗರು ಎನ್ನಲಾಗುತ್ತಿದೆ. ಆಮೂಲಕ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಎಸ್.ಆರ್. ಪಾಟೀಲ್ ಪರವಾಗಿ ಬ್ಯಾಟ್ ಬೀಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಇದರಿಂದ ಹಿನ್ನಡೆಯಾಗಿದೆ.

ವಿಧಾನಪರಿಷತ್‌: ಕಾಂಗ್ರೆಸ್‌ನಿಂದ ನಾಗರಾಜು ಯಾದವ್, ಅಬ್ದುಲ್‌ ಜಬ್ಬಾರ್ ಕಣಕ್ಕೆ |  Prajavani

Karnataka Cong reunites after DKS, Patil call 'truce' | Bengaluru -  Hindustan Times

ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್, ಇಬ್ಬರ ಹೆಸರನ್ನೂ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಎರಡು ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದು, ತನ್ನ ಬೆಂಬಲಿಗರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

8th Annual Day of ABIS - Part 23/30 - Mr Nagaraj Yadav (Chairman of BMTC) -  YouTube

ಅಲ್ಲಂ ವೀರಭದ್ರಪ್ಪ, ವಿ.ಎಸ್. ಉಗ್ರಪ್ಪ, ಎಸ್.ಆರ್. ಪಾಟೀಲ್ ಸೇರಿದಂತೆ ಬಹಳಷ್ಟು ನಾಯಕರು ಆಕಾಂಕ್ಷಿಗಳಾಗಿದ್ದರೂ, ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ರೇಸಲ್ಲಿ ಇಲ್ಲದವರಿಗೆ ಅವಕಾಶ ನೀಡಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ನಿರ್ಧಾರ ಕೈಗೊಂಡಿರುವುದು ಅಚ್ಚರಿ ಮೂಡಿಸಿದೆ. ಅಬ್ದುಲ್ ಜಬ್ಬಾರ್ ಎರಡನೇ ಬಾರಿಗೆ ಮತ್ತು ನಾಗರಾಜ ಯಾದವ್ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶ ಮಾಡಲಿದ್ದಾರೆ. ಕಾಂಗ್ರೆಸ್ ನಿಂದ ಎರಡು ಸ್ಥಾನ ಗೆಲ್ಲುವುದು ಖಚಿತವಾಗಿದ್ದರಿಂದ ಆ ಎರಡು ಸ್ಥಾನಕ್ಕೂ ಭಾರೀ ಪೈಪೋಟಿ ಉಂಟಾಗಿತ್ತು.

The name of the Congress candidates for the Vidhan Sabha seat has been published. Cellphone Showroom Opposition leader Siddaramaiah has succeeded in getting tickets for Patil. Cellphone Showroom KPCC President DK Shivakumar, who was keen to issue a ticket for SR Patil, has been set back. Nagaraj Yadav and Abdul Jabbar have been declared as Congress Party candidates. Opposition leader Siddaramaiah had demanded that the backward classes and minorities should be allowed. Accordingly, the Congress has voted for the UDF candidate for the backward Yadava community and the minority Muslim community.