ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm