ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm