ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am