ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm