ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm