ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm