ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm