ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm