ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 02:18 pm
HK News Desk
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm