ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am