ಬ್ರೇಕಿಂಗ್ ನ್ಯೂಸ್
27-05-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಮೇ 27: ಇತ್ತೀಚೆಗೆ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಯಾರಿಗೂ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಪೊಲೀಸರು ಶಿವನಸಮುದ್ರ ಬಳಿಯ ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬಯಲಾಗಿದೆ!
ಆರೋಪಿ ನಾಗೇಶ್ ಘಟನೆ ನಡೆದು 20 ದಿನ ಕಳೆದರೂ, ಸುಳಿವೇ ಸಿಗದ ಕಾರಣ ಪೊಲೀಸರು ಬಹಳಷ್ಟು ಕಂಗೆಟ್ಟು ಹೋಗಿದ್ದರು. ಉತ್ತರ ಭಾರತದ ವಾರಣಾಸಿ, ಡೆಹ್ರಾಡೂನ್ ಹೀಗೆ ಹಲವಾರು ಪ್ರವಾಸಿ ಕೇಂದ್ರ, ಪುಣ್ಯಕ್ಷೇತ್ರಗಳಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ದೇಶಾದ್ಯಂತ ಹುಡುಕಾಟ ನಡೆಸಿದರೂ ಎಲ್ಲಿಯೂ ಕೂಡ ಸಣ್ಣ ಸುಳಿವೂ ಸಿಕ್ಕಿರಲಿಲ್ಲ.
ಕೊನೆಗೆ, ಆತ ಹೆಚ್ಚು ದೇವಸ್ಥಾನಗಳಿಗೆ ಸುತ್ತಾಟ ಮಾಡುತ್ತಿದ್ದ ಎಂಬ ಮಾಹಿತಿಯಿಂದಾಗಿ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೂ ಬಂದು ಹೋಗಿದ್ದರು. ಮಂಡ್ಯ ಜಿಲ್ಲೆಯ ಶಿವನಸಮುದ್ರ ಬಳಿಯ ಮಾರಮ್ಮ ದೇವಸ್ಥಾನಕ್ಕೂ ತೆರಳಿದ್ದರು. ಅಲ್ಲಿಗೆ ತೆರಳಿದ್ದಾಗ ಪೊಲೀಸರು ಆರೋಪಿ ಬೇಗ ನಮ್ಮ ಕೈಗೆ ಸಿಗಲಿ ಎಂದು ಕೈಮುಗಿದು ಹರಕೆ ಪೂಜೆಯನ್ನೂ ಹೊತ್ತಿದ್ದರು. ಆರೋಪಿ ಒಂದೆರಡು ದಿನದಲ್ಲಿ ಕೈಗೆ ಸಿಕ್ಕರೆ ವಿಶೇಷ ಪೂಜೆ ಹರಕೆ ನೀಡುತ್ತೇವೆಂದು ಕಾಮಾಕ್ಷಿಪಾಳ್ಯ ಪೊಲೀಸರು ಮಾರಮ್ಮ ದೇವಿಗೆ ಹರಕೆ ಹೊತ್ತಿದ್ದರಂತೆ.
ಹರಕೆ ಹೊತ್ತುಕೊಂಡು ಹಿಂತಿರುಗಿದ ಎರಡೇ ದಿನದಲ್ಲಿ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ತಮಿಳುನಾಡಿನ ತಿರುವಣ್ಣಾಮಲೈ ಆಶ್ರಮವೊಂದರಲ್ಲಿ ನಾಗೇಶ್ ತಲೆಮರೆಸಿಕೊಂಡು ಇದ್ದಾನೆ ಎಂಬ ಮಾಹಿತಿ ಆಧರಿಸಿ ಅಲ್ಲಿಗೆ ತೆರಳಿದ್ದರು. ಆರೋಪಿ ಖಚಿತ ಆಗುತ್ತಲೇ ಅದೇ ದಿನ ರಾತ್ರಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಹೀಗಾಗಿ ಮಾರಮ್ಮ ದೇವಿ ಪೊಲೀಸರಿಗೂ ಕೃಪೆ ತೋರಿದ್ದಾಳೆ ಎಂಬ ಮಾತು ಇಲಾಖೆಯ ಒಳಗಿಂದ ಕೇಳಿಬರುತ್ತಿದೆ. ಹರಕೆ ಹೊತ್ತಿದ್ದ ಪೊಲೀಸರು ಗುರುವಾರ ಸಂಜೆ ಶಿವನಸಮುದ್ರ ಬಳಿಯ ಮಾರಮ್ಮ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Acid attack in Bangalore, police had made vow at temple to show the accused soon.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm