ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm