ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm