ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm