ಬ್ರೇಕಿಂಗ್ ನ್ಯೂಸ್
28-05-22 04:13 pm HK News Desk ಕರ್ನಾಟಕ
ಮೈಸೂರು, ಮೇ 28 : ಮಳಲಿ ಮಸೀದಿ ಮಾತ್ರ ಅಲ್ಲ, ದೇಶದಾದ್ಯಂತ ಇರುವ ಮಂದಿರ ಒಡೆದು ಕಟ್ಟಿರುವ ಮಸೀದಿಗಳನ್ನು ಮರಳಿ ಪಡೆಯುತ್ತವೆ. ನೀವು ತಾಕತ್ತಿದ್ದರೆ ತಡೀರಿ ನೋಡೋಣ. ಕಾನೂನು ಪ್ರಕಾರವೇ ನಾವು ಮರಳಿ ಪಡೆಯುತ್ತೇವೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಳಲಿ ಮಸೀದಿಯಿಂದ ಒಂದು ತುಂಡು ಇಟ್ಟಿಗೆ ತೆಗೆಯಲು ಬಿಡಲ್ಲ ಎಂಬ ಎಸ್ ಡಿ ಪಿ ಐ ಅಧ್ಯಕ್ಷರ ಮಾತಿಗೆ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದಾರೆ. ಮಳಲಿಯ ಸಂಪೂರ್ಣ ದೇವಸ್ಥಾನ ಪಡೆದೇ ಪಡೆಯುತ್ತೇವೆ. ಅಲ್ಲಿ ವೀರಶೈವ, ಲಿಂಗಾಯತ ಮಠ ಇತ್ತು ಎನ್ನುವುದು ತಾಂಬೂಲ ಶಾಸ್ತ್ರದ ಪ್ರಕಾರ ತಿಳಿದುಬಂದಿದೆ. ನಾವು ಕಾನೂನು ಅಡಿಯಲ್ಲೇ ಮರಳಿ ಪಡೆಯುತ್ತೇವೆ. ನೀವು ತಾಕತ್ ಇದ್ದರೆ ತಡೆಯಿರಿ. ನಾಚಿಕೆ, ಮಾನ ಮರ್ಯಾದೆ ಇದ್ದರೆ ಸೌಹಾರ್ದವಾಗಿ ಬದುಕುವ ಆಸೆ ಇದ್ದರೆ ಕಬಳಿಸಿರುವ ದೇವಸ್ಥಾನ ವಾಪಸ್ ಕೊಡಿ ಎಂದು ಹೇಳಿದ್ದಾರೆ.
ಇದು ಯಾರ ಅಪ್ಪನ ಸೊತ್ತು ಅಲ್ಲ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಹೇಳಿದ್ದಾರೆ. ಇದು ನಮ್ಮ ಅಪ್ಪನದೇ ಏನೀವಾಗ? ನಿಮ್ಮ ಸೊಕ್ಕಿನ ಮಾತು ಬಿಟ್ಟುಬಿಡಿ. ಮೇಲೆ ನಿಮ್ಮ ಅಪ್ಪ ಕೂತಿದ್ದಾನೆ. ಹಿಂದೆ ಅಯೋಧ್ಯೆಯ ವಿಚಾರದಲ್ಲಿಯೂ ಇದೇ ರೀತಿಯ ಮಾತು ಹೇಳುತ್ತಿದ್ದರು. ಆನಂತರ ಕಾನೂನು ಪ್ರಕಾರವೇ ವಶಕ್ಕೆ ಪಡೆದು ಅಲ್ಲಿ ರಾಮನ ಮಂದಿರ ನಿರ್ಮಾಣ ಮಾಡುತ್ತಿದ್ದೇವೆ. ಆಗಲೂ ರಕ್ತಪಾತ ಆಗುತ್ತೆ ಎಂದು ಹೇಳಿದ್ದಿರಿ. ಒಂದು ತೊಟ್ಟು ಹನಿ ರಕ್ತ ಬೀಳಲಿಲ್ಲ. ನಾವು ಅದೇ ಜಾಗದಲ್ಲಿ ಮಂದಿರ ಕಟ್ತಾ ಇದ್ದೇವೆ.
ಎಸ್ಡಿಪಿಐ ಅಧ್ಯಕ್ಷರ ಮಾತು ಪ್ರಚೋದನೆಗೆ ದಾರಿ ಮಾಡಿಕೊಡುತ್ತಿದೆ. ಅವರ ಉದ್ದೇಶ ಅದೇ ಇರುವಂತಿದೆ. ಆದರೆ ನಮ್ಮ ಧರ್ಮದ ಸಂಪ್ರದಾಯದ ತಾಂಬೂಲ ಪ್ರಶ್ನೆ ಬಗ್ಗೆ ಕೆಟ್ಟದಾಗಿ ಮಾತಾಡಿದರೆ ನಾಲಿಗೆ ಸೀಳಿ ಹಾಕುತ್ತೇವೆ. ಇಂತಹ ಮಾತು ಆಡುತ್ತಿರುವ ವ್ಯಕ್ತಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನಮ್ಮ ಶಾಸ್ತ್ರದ ಬಗ್ಗೆ ಮಾತನಾಡುವವನು ನಾಶವಾಗುತ್ತಾನೆ. ಉಳಿಯೋದಿಲ್ಲ ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
Mysuru Pramod Muthalik slams SDPI for controversial statement made during the SDPI rally in Mangalore stating that they can't even touch the soil of Malali mosque. Muthalik claimed that we know how to take the soil of Malali by the support of the government.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm