ಬ್ರೇಕಿಂಗ್ ನ್ಯೂಸ್
28-05-22 04:13 pm HK News Desk ಕರ್ನಾಟಕ
ಮೈಸೂರು, ಮೇ 28 : ಮಳಲಿ ಮಸೀದಿ ಮಾತ್ರ ಅಲ್ಲ, ದೇಶದಾದ್ಯಂತ ಇರುವ ಮಂದಿರ ಒಡೆದು ಕಟ್ಟಿರುವ ಮಸೀದಿಗಳನ್ನು ಮರಳಿ ಪಡೆಯುತ್ತವೆ. ನೀವು ತಾಕತ್ತಿದ್ದರೆ ತಡೀರಿ ನೋಡೋಣ. ಕಾನೂನು ಪ್ರಕಾರವೇ ನಾವು ಮರಳಿ ಪಡೆಯುತ್ತೇವೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮಳಲಿ ಮಸೀದಿಯಿಂದ ಒಂದು ತುಂಡು ಇಟ್ಟಿಗೆ ತೆಗೆಯಲು ಬಿಡಲ್ಲ ಎಂಬ ಎಸ್ ಡಿ ಪಿ ಐ ಅಧ್ಯಕ್ಷರ ಮಾತಿಗೆ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದಾರೆ. ಮಳಲಿಯ ಸಂಪೂರ್ಣ ದೇವಸ್ಥಾನ ಪಡೆದೇ ಪಡೆಯುತ್ತೇವೆ. ಅಲ್ಲಿ ವೀರಶೈವ, ಲಿಂಗಾಯತ ಮಠ ಇತ್ತು ಎನ್ನುವುದು ತಾಂಬೂಲ ಶಾಸ್ತ್ರದ ಪ್ರಕಾರ ತಿಳಿದುಬಂದಿದೆ. ನಾವು ಕಾನೂನು ಅಡಿಯಲ್ಲೇ ಮರಳಿ ಪಡೆಯುತ್ತೇವೆ. ನೀವು ತಾಕತ್ ಇದ್ದರೆ ತಡೆಯಿರಿ. ನಾಚಿಕೆ, ಮಾನ ಮರ್ಯಾದೆ ಇದ್ದರೆ ಸೌಹಾರ್ದವಾಗಿ ಬದುಕುವ ಆಸೆ ಇದ್ದರೆ ಕಬಳಿಸಿರುವ ದೇವಸ್ಥಾನ ವಾಪಸ್ ಕೊಡಿ ಎಂದು ಹೇಳಿದ್ದಾರೆ.
ಇದು ಯಾರ ಅಪ್ಪನ ಸೊತ್ತು ಅಲ್ಲ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಹೇಳಿದ್ದಾರೆ. ಇದು ನಮ್ಮ ಅಪ್ಪನದೇ ಏನೀವಾಗ? ನಿಮ್ಮ ಸೊಕ್ಕಿನ ಮಾತು ಬಿಟ್ಟುಬಿಡಿ. ಮೇಲೆ ನಿಮ್ಮ ಅಪ್ಪ ಕೂತಿದ್ದಾನೆ. ಹಿಂದೆ ಅಯೋಧ್ಯೆಯ ವಿಚಾರದಲ್ಲಿಯೂ ಇದೇ ರೀತಿಯ ಮಾತು ಹೇಳುತ್ತಿದ್ದರು. ಆನಂತರ ಕಾನೂನು ಪ್ರಕಾರವೇ ವಶಕ್ಕೆ ಪಡೆದು ಅಲ್ಲಿ ರಾಮನ ಮಂದಿರ ನಿರ್ಮಾಣ ಮಾಡುತ್ತಿದ್ದೇವೆ. ಆಗಲೂ ರಕ್ತಪಾತ ಆಗುತ್ತೆ ಎಂದು ಹೇಳಿದ್ದಿರಿ. ಒಂದು ತೊಟ್ಟು ಹನಿ ರಕ್ತ ಬೀಳಲಿಲ್ಲ. ನಾವು ಅದೇ ಜಾಗದಲ್ಲಿ ಮಂದಿರ ಕಟ್ತಾ ಇದ್ದೇವೆ.
ಎಸ್ಡಿಪಿಐ ಅಧ್ಯಕ್ಷರ ಮಾತು ಪ್ರಚೋದನೆಗೆ ದಾರಿ ಮಾಡಿಕೊಡುತ್ತಿದೆ. ಅವರ ಉದ್ದೇಶ ಅದೇ ಇರುವಂತಿದೆ. ಆದರೆ ನಮ್ಮ ಧರ್ಮದ ಸಂಪ್ರದಾಯದ ತಾಂಬೂಲ ಪ್ರಶ್ನೆ ಬಗ್ಗೆ ಕೆಟ್ಟದಾಗಿ ಮಾತಾಡಿದರೆ ನಾಲಿಗೆ ಸೀಳಿ ಹಾಕುತ್ತೇವೆ. ಇಂತಹ ಮಾತು ಆಡುತ್ತಿರುವ ವ್ಯಕ್ತಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನಮ್ಮ ಶಾಸ್ತ್ರದ ಬಗ್ಗೆ ಮಾತನಾಡುವವನು ನಾಶವಾಗುತ್ತಾನೆ. ಉಳಿಯೋದಿಲ್ಲ ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
Mysuru Pramod Muthalik slams SDPI for controversial statement made during the SDPI rally in Mangalore stating that they can't even touch the soil of Malali mosque. Muthalik claimed that we know how to take the soil of Malali by the support of the government.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm