ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm