ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm