ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm