ಬ್ರೇಕಿಂಗ್ ನ್ಯೂಸ್
29-05-22 12:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಕ್ಕಿಲ್ಲ ಎಂಬ ಕೊರಗಿನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೀಣ್ಯದಲ್ಲಿ ನಡೆದಿದೆ.
ಪೀಣ್ಯದ ಸರ್ಕಾರಿ ಐಟಿಐ ಬಳಿ ಘಟನೆ ನಡೆದಿದ್ದು ಆಂಧ್ರದ ಮಡಕಶಿರಾ ಮೂಲದ ನವೀನ್ (31) ಎಂಬಾತ ಮೃತ ಯುವಕ. ಆತ್ಮಹತ್ಯೆಗೆ ಯತ್ನಿಸಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಎಡಗೈ ಸ್ವಾಧೀನವಿಲ್ಲದಿರುವ ಸಮಸ್ಯೆಯಿಂದಲೂ ಯುವಕ ಬಳಲುತ್ತಿದ್ದ ಎನ್ನಲಾಗುತ್ತಿದ್ದು ಇದರಿಂದ ತನಗೆ ಹುಡುಗಿ ಸಿಗುತ್ತಿಲ್ಲ ಎಂಬ ನೋವು ಕಾಡುತ್ತಿತ್ತು.
ನವೀನ್ ಪೀಣ್ಯದ ಗಾರ್ಮೆಂಟ್ಸ್ ಕಂಪನಿ ಒಂದರಲ್ಲಿ ಕ್ವಾಲಿಟಿ ಚೆಕ್ ಮಾಡುವ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಬಾಟಲ್ ನಲ್ಲಿ ಪೆಟ್ರೋಲ್ ಖರೀದಿಸಿ ತಂದು ಆತ್ಮಹತ್ಯೆ ಮಾಡಿಕೊಂಡಿದ್ದ. ನವೀನ್ ತಂದೆಯವರೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಜೀವನದಲ್ಲಿ ನವೀನ್ ಬೇಸತ್ತಿದ್ದ.
ಆತ್ಮಹತ್ಯಗೆ ಯತ್ನಿಸಿದಾಗ ನವೀನ್ ಕೂಗಾಡುವುದನ್ನು ಸ್ಥಳೀಯರು ಹಾಗೂ ಕೆಲ ವಿದ್ಯಾರ್ಥಿಗಳು ಗಮನಿಸಿದ್ದಾರೆ. ತಕ್ಷಣ ಆತನನ್ನು ESI ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಸಪ್ತಗಿರಿ ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬುಲೆನ್ಸ್ ನಲ್ಲಿಯೇ ಮೃತಪಟ್ಟಿದ್ದಾನೆ. ಹೆಸರಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ನವೀನ್ ಮರಣೋತ್ತರ ಪರೀಕ್ಷೆ ನಡೆದಿದೆ. RMC ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Man depressed as he finds no girl for marriage, sets self on fire, dies. The deceased has been identified as Naveen (31).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm