ಬ್ರೇಕಿಂಗ್ ನ್ಯೂಸ್
29-05-22 08:23 pm HK News Desk ಕರ್ನಾಟಕ
ಹಾವೇರಿ, ಮೇ 29: ಬಸವರಾಜ ಹೊರಟ್ಟಿ ಸೋಲಿನ ಭೀತಿ ಹಾಗೂ ಅಧಿಕಾರದ ಆಸೆಯಿಂದ ಬಿಜೆಪಿ ಸೇರಿದ್ದಾರೆ. ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ನಂಬಿದ ಸಿದ್ಧಾಂತ ಬಲಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಲೀಂ ಅಹ್ಮದ್, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ್ ಸ್ಪರ್ಧಿಸಿದ್ದಾರೆ. ಬಸವರಾಜ ಗುರಿಕಾರ್ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಅವರ ಕೆಲಸ ಪ್ರಾಮಾಣಿಕತೆ, ಹೋರಾಟ ಎಲ್ಲ ಶಿಕ್ಷಕರಿಗೆ ಗೊತ್ತಿದೆ. ಬಸವರಾಜ ಹೊರಟ್ಟಿಯವರು ಈ ಕ್ಷೇತ್ರದಿಂದ ಏಳು ಬಾರಿ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಕೊನೆಗಾಲದಲ್ಲಿ ಹೊರಟ್ಟಿಯವರು ಪಕ್ಷ ಬದಲಾವಣೆ ಮಾಡಿದ್ದಾರೆ. ಇದಕ್ಕೆ ಕಾರಣ ಸೋಲಿನ ಭೀತಿ ಇರಬಹುದು. ಇಲ್ಲದಿದ್ದರೆ ಅಧಿಕಾರದ ಆಸೆಯೂ ಇರಬಹುದು. ಮತ್ತೆ ಚೇರ್ಮನ್ ಆಗಿ ಮುಂದುವರೆಯಬಹುದು ಎಂಬ ದೂರಾಲೋಚನೆ ಇಟ್ಟುಕೊಂಡು ಬಿಜೆಪಿಗೆ ಹೋಗಿದ್ದಾರೆ.

ಈತನಕ ಜಾತ್ಯಾತೀತ ವಿಚಾರ ಇಟ್ಟುಕೊಂಡು ಚುನಾವಣೆ ಗೆದ್ದು ಅವರು ಈಗ ಕೋಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಹೊರಟ್ಟಿ ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ಸಿದ್ಧಾಂತ ಬಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗಾಗಿ ಶಿಕ್ಷಕರು ಈ ಬಾರಿ ಬಸವರಾಜ ಗುರಿಕಾರ್ ಅವರಿಗೆ ಆಶೀರ್ವಾದ ಮಾಡಬೇಕು. ಜಾತ್ಯತೀತ ಸಿದ್ಧಾಂತಕ್ಕೆ ಜಯ ದೊರಕಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಪ್ರಧಾನಿ ನೆಹರು ಹಾಗೂ ಪ್ರಧಾನಿ ಮೋದಿ ಸಾಧನೆಗಳ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದು ಎಂಟು ವರ್ಷವಾದರೂ ಒಂದೇ ಒಂದು ಪ್ರೆಸ್ ಕಾನ್ಫರೆನ್ಸ್ ಮಾಡಿಲ್ಲ. ಸುಳ್ಳು ಹೇಳುತ್ತಾ ಮೋದಿ ಅಧಿಕಾರ ನಡೆಸುತ್ತಾ ಬಂದಿದ್ದಾರೆ. ಮೈ ನರೇಂದ್ರ ಮೋದಿ ಹುಂ ಅಂತ ಹೇಳ್ತಾರಲ್ಲಾ ಅದೊಂದೇ ಅವರು ಹೇಳಿದ ಸತ್ಯ. ನೆಹರೂರವರು ತಮ್ಮ ಅಧಿಕಾರಾವಧಿಯಲ್ಲಿ ಕಟ್ಟಿ ಬೆಳೆಸಿದ ಸಂಸ್ಥೆ, ಕಟ್ಟಡಗಳು ಎಲ್ಲವನ್ನೂ ಇವರು ಮಾರಿದರು. ಅವರು ಕಟ್ಟಿದ್ದರು, ಇವರು ಮಾರಿದರು. ಇದೇ ನೆಹರೂ ಹಾಗೂ ಮೋದಿಯವರ ನಡುವೆ ಇರುವ ವ್ಯತ್ಯಾಸ ಎಂದು ಮೋದಿ ವಿರುದ್ದ ಸಲೀಂ ಅಹ್ಮದ್ ವ್ಯಂಗ್ಯವಾಡಿದರು.
Desire for position Basavaraj Horatti has joined BJP, slams KPCC secretary Salim Ahmed.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm