ಬ್ರೇಕಿಂಗ್ ನ್ಯೂಸ್
29-05-22 08:23 pm HK News Desk ಕರ್ನಾಟಕ
ಹಾವೇರಿ, ಮೇ 29: ಬಸವರಾಜ ಹೊರಟ್ಟಿ ಸೋಲಿನ ಭೀತಿ ಹಾಗೂ ಅಧಿಕಾರದ ಆಸೆಯಿಂದ ಬಿಜೆಪಿ ಸೇರಿದ್ದಾರೆ. ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ನಂಬಿದ ಸಿದ್ಧಾಂತ ಬಲಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಲೀಂ ಅಹ್ಮದ್, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ್ ಸ್ಪರ್ಧಿಸಿದ್ದಾರೆ. ಬಸವರಾಜ ಗುರಿಕಾರ್ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಅವರ ಕೆಲಸ ಪ್ರಾಮಾಣಿಕತೆ, ಹೋರಾಟ ಎಲ್ಲ ಶಿಕ್ಷಕರಿಗೆ ಗೊತ್ತಿದೆ. ಬಸವರಾಜ ಹೊರಟ್ಟಿಯವರು ಈ ಕ್ಷೇತ್ರದಿಂದ ಏಳು ಬಾರಿ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಕೊನೆಗಾಲದಲ್ಲಿ ಹೊರಟ್ಟಿಯವರು ಪಕ್ಷ ಬದಲಾವಣೆ ಮಾಡಿದ್ದಾರೆ. ಇದಕ್ಕೆ ಕಾರಣ ಸೋಲಿನ ಭೀತಿ ಇರಬಹುದು. ಇಲ್ಲದಿದ್ದರೆ ಅಧಿಕಾರದ ಆಸೆಯೂ ಇರಬಹುದು. ಮತ್ತೆ ಚೇರ್ಮನ್ ಆಗಿ ಮುಂದುವರೆಯಬಹುದು ಎಂಬ ದೂರಾಲೋಚನೆ ಇಟ್ಟುಕೊಂಡು ಬಿಜೆಪಿಗೆ ಹೋಗಿದ್ದಾರೆ.
ಈತನಕ ಜಾತ್ಯಾತೀತ ವಿಚಾರ ಇಟ್ಟುಕೊಂಡು ಚುನಾವಣೆ ಗೆದ್ದು ಅವರು ಈಗ ಕೋಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಹೊರಟ್ಟಿ ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ಸಿದ್ಧಾಂತ ಬಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗಾಗಿ ಶಿಕ್ಷಕರು ಈ ಬಾರಿ ಬಸವರಾಜ ಗುರಿಕಾರ್ ಅವರಿಗೆ ಆಶೀರ್ವಾದ ಮಾಡಬೇಕು. ಜಾತ್ಯತೀತ ಸಿದ್ಧಾಂತಕ್ಕೆ ಜಯ ದೊರಕಿಸಬೇಕು ಎಂದು ಹೇಳಿದರು.
ಇತ್ತೀಚೆಗೆ ಮಾಜಿ ಪ್ರಧಾನಿ ನೆಹರು ಹಾಗೂ ಪ್ರಧಾನಿ ಮೋದಿ ಸಾಧನೆಗಳ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದು ಎಂಟು ವರ್ಷವಾದರೂ ಒಂದೇ ಒಂದು ಪ್ರೆಸ್ ಕಾನ್ಫರೆನ್ಸ್ ಮಾಡಿಲ್ಲ. ಸುಳ್ಳು ಹೇಳುತ್ತಾ ಮೋದಿ ಅಧಿಕಾರ ನಡೆಸುತ್ತಾ ಬಂದಿದ್ದಾರೆ. ಮೈ ನರೇಂದ್ರ ಮೋದಿ ಹುಂ ಅಂತ ಹೇಳ್ತಾರಲ್ಲಾ ಅದೊಂದೇ ಅವರು ಹೇಳಿದ ಸತ್ಯ. ನೆಹರೂರವರು ತಮ್ಮ ಅಧಿಕಾರಾವಧಿಯಲ್ಲಿ ಕಟ್ಟಿ ಬೆಳೆಸಿದ ಸಂಸ್ಥೆ, ಕಟ್ಟಡಗಳು ಎಲ್ಲವನ್ನೂ ಇವರು ಮಾರಿದರು. ಅವರು ಕಟ್ಟಿದ್ದರು, ಇವರು ಮಾರಿದರು. ಇದೇ ನೆಹರೂ ಹಾಗೂ ಮೋದಿಯವರ ನಡುವೆ ಇರುವ ವ್ಯತ್ಯಾಸ ಎಂದು ಮೋದಿ ವಿರುದ್ದ ಸಲೀಂ ಅಹ್ಮದ್ ವ್ಯಂಗ್ಯವಾಡಿದರು.
Desire for position Basavaraj Horatti has joined BJP, slams KPCC secretary Salim Ahmed.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm