ಬ್ರೇಕಿಂಗ್ ನ್ಯೂಸ್
29-05-22 08:23 pm HK News Desk ಕರ್ನಾಟಕ
ಹಾವೇರಿ, ಮೇ 29: ಬಸವರಾಜ ಹೊರಟ್ಟಿ ಸೋಲಿನ ಭೀತಿ ಹಾಗೂ ಅಧಿಕಾರದ ಆಸೆಯಿಂದ ಬಿಜೆಪಿ ಸೇರಿದ್ದಾರೆ. ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ನಂಬಿದ ಸಿದ್ಧಾಂತ ಬಲಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಲೀಂ ಅಹ್ಮದ್, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ್ ಸ್ಪರ್ಧಿಸಿದ್ದಾರೆ. ಬಸವರಾಜ ಗುರಿಕಾರ್ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಅವರ ಕೆಲಸ ಪ್ರಾಮಾಣಿಕತೆ, ಹೋರಾಟ ಎಲ್ಲ ಶಿಕ್ಷಕರಿಗೆ ಗೊತ್ತಿದೆ. ಬಸವರಾಜ ಹೊರಟ್ಟಿಯವರು ಈ ಕ್ಷೇತ್ರದಿಂದ ಏಳು ಬಾರಿ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಕೊನೆಗಾಲದಲ್ಲಿ ಹೊರಟ್ಟಿಯವರು ಪಕ್ಷ ಬದಲಾವಣೆ ಮಾಡಿದ್ದಾರೆ. ಇದಕ್ಕೆ ಕಾರಣ ಸೋಲಿನ ಭೀತಿ ಇರಬಹುದು. ಇಲ್ಲದಿದ್ದರೆ ಅಧಿಕಾರದ ಆಸೆಯೂ ಇರಬಹುದು. ಮತ್ತೆ ಚೇರ್ಮನ್ ಆಗಿ ಮುಂದುವರೆಯಬಹುದು ಎಂಬ ದೂರಾಲೋಚನೆ ಇಟ್ಟುಕೊಂಡು ಬಿಜೆಪಿಗೆ ಹೋಗಿದ್ದಾರೆ.

ಈತನಕ ಜಾತ್ಯಾತೀತ ವಿಚಾರ ಇಟ್ಟುಕೊಂಡು ಚುನಾವಣೆ ಗೆದ್ದು ಅವರು ಈಗ ಕೋಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಹೊರಟ್ಟಿ ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ಸಿದ್ಧಾಂತ ಬಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗಾಗಿ ಶಿಕ್ಷಕರು ಈ ಬಾರಿ ಬಸವರಾಜ ಗುರಿಕಾರ್ ಅವರಿಗೆ ಆಶೀರ್ವಾದ ಮಾಡಬೇಕು. ಜಾತ್ಯತೀತ ಸಿದ್ಧಾಂತಕ್ಕೆ ಜಯ ದೊರಕಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಪ್ರಧಾನಿ ನೆಹರು ಹಾಗೂ ಪ್ರಧಾನಿ ಮೋದಿ ಸಾಧನೆಗಳ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದು ಎಂಟು ವರ್ಷವಾದರೂ ಒಂದೇ ಒಂದು ಪ್ರೆಸ್ ಕಾನ್ಫರೆನ್ಸ್ ಮಾಡಿಲ್ಲ. ಸುಳ್ಳು ಹೇಳುತ್ತಾ ಮೋದಿ ಅಧಿಕಾರ ನಡೆಸುತ್ತಾ ಬಂದಿದ್ದಾರೆ. ಮೈ ನರೇಂದ್ರ ಮೋದಿ ಹುಂ ಅಂತ ಹೇಳ್ತಾರಲ್ಲಾ ಅದೊಂದೇ ಅವರು ಹೇಳಿದ ಸತ್ಯ. ನೆಹರೂರವರು ತಮ್ಮ ಅಧಿಕಾರಾವಧಿಯಲ್ಲಿ ಕಟ್ಟಿ ಬೆಳೆಸಿದ ಸಂಸ್ಥೆ, ಕಟ್ಟಡಗಳು ಎಲ್ಲವನ್ನೂ ಇವರು ಮಾರಿದರು. ಅವರು ಕಟ್ಟಿದ್ದರು, ಇವರು ಮಾರಿದರು. ಇದೇ ನೆಹರೂ ಹಾಗೂ ಮೋದಿಯವರ ನಡುವೆ ಇರುವ ವ್ಯತ್ಯಾಸ ಎಂದು ಮೋದಿ ವಿರುದ್ದ ಸಲೀಂ ಅಹ್ಮದ್ ವ್ಯಂಗ್ಯವಾಡಿದರು.
Desire for position Basavaraj Horatti has joined BJP, slams KPCC secretary Salim Ahmed.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am