ಬ್ರೇಕಿಂಗ್ ನ್ಯೂಸ್
29-05-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದು, ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಸ್ಥಾನ ಗಿಟ್ಟಿಸಿದ್ದರೆ, ಅವರೊಂದಿಗೆ ಅಚ್ಚರಿ ಎಂಬಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಜಗ್ಗೇಶ್ ಅವರಿಗೂ ಮಣೆ ಹಾಕಿದೆ.
ಬಿಜೆಪಿ ಹೊರಡಿಸಿರುವ ಪಟ್ಟಿಯಲ್ಲಿ ನಿರ್ಮಲಾ ಹೆಸರು ನಿರೀಕ್ಷಿತ ಎನಿಸಿಕೊಂಡಿದ್ದರೆ, ಜಗ್ಗೇಶ್ ಹೆಸರು ರಾಜ್ಯ ಬಿಜೆಪಿ ನಾಯಕರೇ ಅಚ್ಚರಿ ಪಡುವಂತಾಗಿದೆ. ನಿರ್ಮಲಾ ಸೀತಾರಾಮನ್ ಆಯ್ಕೆಯನ್ನು ಊಹಿಸಿದ್ದ ಕಾಂಗ್ರೆಸ್, ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕಾಣಿಕೆ ಏನು ಎಂದು ಪ್ರಶ್ನಿಸಿದ್ದು, ವೈರಲ್ ಆಗಿತ್ತು. ಹೀಗಾಗಿ ಈ ಬಾರಿ ನಿರ್ಮಲಾ ಬದಲಿಗೆ ಬೇರೊಬ್ಬರಿಗೆ ಅವಕಾಶ ನೀಡಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು.

ಒಂದು ಹಂತದಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸುವ ಸೂಚನೆಗಳೂ ಇದ್ದವು. ಆದರೆ ಈಗ ರಾಜ್ಯಸಭೆಗೆ ದಿಢೀರ್ ಆಗಿ ಇಬ್ಬರನ್ನು ಆಯ್ಕೆ ಮಾಡಿದ್ದು ನಿರ್ಮಲಾ ಅವರನ್ನೇ ಆಯ್ಕೆ ಮಾಡಿದೆ. ವಿಶೇಷ ಅಂದ್ರೆ, ಕನ್ನಡ ಚಿತ್ರರಂಗಕ್ಕೂ ಅಪರೂಪದಲ್ಲಿ ಎಂಬಂತೆ ರಾಜ್ಯಸಭೆಗೆ ಸ್ಥಾನ ಕೊಟ್ಟಿದೆ. ಜಗ್ಗೇಶ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಲ್ಲದೆ, ಎಂಎಲ್ಸಿ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ದೊಡ್ಡ ಸ್ಥಾನವನ್ನೇ ನೀಡಲಾಗಿದೆ.
ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಾ ಅನ್ನುವ ಕುತೂಹಲ ಉಳಿಸಿಬಿಟ್ಟಿದೆ. ಇಬ್ಬರನ್ನು ಮಾತ್ರ ಕಣಕ್ಕಿಳಿಸಿರುವುದರಿಂದ ಮೂರನೇ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಮಾತೂ ಕೇಳಿಬರುತ್ತಿದೆ.
Finance Minister Nirmala Sitharaman is selected again for the Raya Sabha from the State. She got renominated from the party on Sunday May 29. BJP decided to field Actor Jaggesh also in the Rajya Sabha election. His nomination comes as a surprise for the party insiders too as he was not in the race.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm