ಬ್ರೇಕಿಂಗ್ ನ್ಯೂಸ್
29-05-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದು, ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಸ್ಥಾನ ಗಿಟ್ಟಿಸಿದ್ದರೆ, ಅವರೊಂದಿಗೆ ಅಚ್ಚರಿ ಎಂಬಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಜಗ್ಗೇಶ್ ಅವರಿಗೂ ಮಣೆ ಹಾಕಿದೆ.
ಬಿಜೆಪಿ ಹೊರಡಿಸಿರುವ ಪಟ್ಟಿಯಲ್ಲಿ ನಿರ್ಮಲಾ ಹೆಸರು ನಿರೀಕ್ಷಿತ ಎನಿಸಿಕೊಂಡಿದ್ದರೆ, ಜಗ್ಗೇಶ್ ಹೆಸರು ರಾಜ್ಯ ಬಿಜೆಪಿ ನಾಯಕರೇ ಅಚ್ಚರಿ ಪಡುವಂತಾಗಿದೆ. ನಿರ್ಮಲಾ ಸೀತಾರಾಮನ್ ಆಯ್ಕೆಯನ್ನು ಊಹಿಸಿದ್ದ ಕಾಂಗ್ರೆಸ್, ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕಾಣಿಕೆ ಏನು ಎಂದು ಪ್ರಶ್ನಿಸಿದ್ದು, ವೈರಲ್ ಆಗಿತ್ತು. ಹೀಗಾಗಿ ಈ ಬಾರಿ ನಿರ್ಮಲಾ ಬದಲಿಗೆ ಬೇರೊಬ್ಬರಿಗೆ ಅವಕಾಶ ನೀಡಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು.

ಒಂದು ಹಂತದಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸುವ ಸೂಚನೆಗಳೂ ಇದ್ದವು. ಆದರೆ ಈಗ ರಾಜ್ಯಸಭೆಗೆ ದಿಢೀರ್ ಆಗಿ ಇಬ್ಬರನ್ನು ಆಯ್ಕೆ ಮಾಡಿದ್ದು ನಿರ್ಮಲಾ ಅವರನ್ನೇ ಆಯ್ಕೆ ಮಾಡಿದೆ. ವಿಶೇಷ ಅಂದ್ರೆ, ಕನ್ನಡ ಚಿತ್ರರಂಗಕ್ಕೂ ಅಪರೂಪದಲ್ಲಿ ಎಂಬಂತೆ ರಾಜ್ಯಸಭೆಗೆ ಸ್ಥಾನ ಕೊಟ್ಟಿದೆ. ಜಗ್ಗೇಶ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಲ್ಲದೆ, ಎಂಎಲ್ಸಿ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ದೊಡ್ಡ ಸ್ಥಾನವನ್ನೇ ನೀಡಲಾಗಿದೆ.
ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಾ ಅನ್ನುವ ಕುತೂಹಲ ಉಳಿಸಿಬಿಟ್ಟಿದೆ. ಇಬ್ಬರನ್ನು ಮಾತ್ರ ಕಣಕ್ಕಿಳಿಸಿರುವುದರಿಂದ ಮೂರನೇ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಮಾತೂ ಕೇಳಿಬರುತ್ತಿದೆ.
Finance Minister Nirmala Sitharaman is selected again for the Raya Sabha from the State. She got renominated from the party on Sunday May 29. BJP decided to field Actor Jaggesh also in the Rajya Sabha election. His nomination comes as a surprise for the party insiders too as he was not in the race.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm