ಬ್ರೇಕಿಂಗ್ ನ್ಯೂಸ್
29-05-22 08:52 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 29 : ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದು, ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಸ್ಥಾನ ಗಿಟ್ಟಿಸಿದ್ದರೆ, ಅವರೊಂದಿಗೆ ಅಚ್ಚರಿ ಎಂಬಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಜಗ್ಗೇಶ್ ಅವರಿಗೂ ಮಣೆ ಹಾಕಿದೆ.
ಬಿಜೆಪಿ ಹೊರಡಿಸಿರುವ ಪಟ್ಟಿಯಲ್ಲಿ ನಿರ್ಮಲಾ ಹೆಸರು ನಿರೀಕ್ಷಿತ ಎನಿಸಿಕೊಂಡಿದ್ದರೆ, ಜಗ್ಗೇಶ್ ಹೆಸರು ರಾಜ್ಯ ಬಿಜೆಪಿ ನಾಯಕರೇ ಅಚ್ಚರಿ ಪಡುವಂತಾಗಿದೆ. ನಿರ್ಮಲಾ ಸೀತಾರಾಮನ್ ಆಯ್ಕೆಯನ್ನು ಊಹಿಸಿದ್ದ ಕಾಂಗ್ರೆಸ್, ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕಾಣಿಕೆ ಏನು ಎಂದು ಪ್ರಶ್ನಿಸಿದ್ದು, ವೈರಲ್ ಆಗಿತ್ತು. ಹೀಗಾಗಿ ಈ ಬಾರಿ ನಿರ್ಮಲಾ ಬದಲಿಗೆ ಬೇರೊಬ್ಬರಿಗೆ ಅವಕಾಶ ನೀಡಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು.
ಒಂದು ಹಂತದಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಉತ್ತರ ಪ್ರದೇಶದಿಂದ ಕಣಕ್ಕಿಳಿಸುವ ಸೂಚನೆಗಳೂ ಇದ್ದವು. ಆದರೆ ಈಗ ರಾಜ್ಯಸಭೆಗೆ ದಿಢೀರ್ ಆಗಿ ಇಬ್ಬರನ್ನು ಆಯ್ಕೆ ಮಾಡಿದ್ದು ನಿರ್ಮಲಾ ಅವರನ್ನೇ ಆಯ್ಕೆ ಮಾಡಿದೆ. ವಿಶೇಷ ಅಂದ್ರೆ, ಕನ್ನಡ ಚಿತ್ರರಂಗಕ್ಕೂ ಅಪರೂಪದಲ್ಲಿ ಎಂಬಂತೆ ರಾಜ್ಯಸಭೆಗೆ ಸ್ಥಾನ ಕೊಟ್ಟಿದೆ. ಜಗ್ಗೇಶ್ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಲ್ಲದೆ, ಎಂಎಲ್ಸಿ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ದೊಡ್ಡ ಸ್ಥಾನವನ್ನೇ ನೀಡಲಾಗಿದೆ.
ಸದ್ಯಕ್ಕೆ ಇಬ್ಬರ ಹೆಸರು ಮಾತ್ರ ಘೋಷಣೆ ಮಾಡಿರುವ ಬಿಜೆಪಿ, ಮೂರನೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಾ ಅನ್ನುವ ಕುತೂಹಲ ಉಳಿಸಿಬಿಟ್ಟಿದೆ. ಇಬ್ಬರನ್ನು ಮಾತ್ರ ಕಣಕ್ಕಿಳಿಸಿರುವುದರಿಂದ ಮೂರನೇ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವ ಮಾತೂ ಕೇಳಿಬರುತ್ತಿದೆ.
Finance Minister Nirmala Sitharaman is selected again for the Raya Sabha from the State. She got renominated from the party on Sunday May 29. BJP decided to field Actor Jaggesh also in the Rajya Sabha election. His nomination comes as a surprise for the party insiders too as he was not in the race.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm