ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm