ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm