ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm