ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm