ಬ್ರೇಕಿಂಗ್ ನ್ಯೂಸ್
30-05-22 05:17 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: ಇವತ್ತು ಕೇವಲ ಮತ ಬ್ಯಾಂಕಿಗಾಗಿ ಭಯೋತ್ಪಾದಕರ ಕಾಲು ನೆಕ್ಕುವ ಸ್ಥಿತಿಗೆ ಸಿದ್ದರಾಮಯ್ಯ ಹೋಗಿದ್ದಾರೆ. ಕಾಲು ನೆಕ್ಕುವ ಭಿಕ್ಷಾಟನೆಗೆ ಹೋಗಿದ್ದಾರೆ. ಅವರ ಚಿಂತನೆ ರಾವಣನದ್ದು, ಮುಖ ಮಾತ್ರ ಸಿದ್ದರಾಮನದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ನಳಿನ್ ಕುಮಾರ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರು ಸಿದ್ದರಾಮಯ್ಯ ಅವರನ್ನು ಕರ್ನಾಟಕದಿಂದಲೇ ಓಡಿಸಲಿದ್ದಾರೆ ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ. ಮುಂದೆ ಬಾದಾಮಿ ಜಿಲ್ಲೆಯಿಂದಲೂ ಓಡಿಸಲಿದ್ದಾರೆ ಎಂದು ಹೇಳಿದರು.
ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಯಾಕೆ ಬೇಲ್ ನಲ್ಲಿದ್ದಾರೆ ಅನ್ನುವುದು ತಿಳಿದಿರಬೇಕಲ್ಲ. ನಿಮ್ಮ ಯುವ ಕಾಂಗ್ರೆಸ್ ಅಧ್ಯಕ್ಷನ ಮೇಲೆ ಎಷ್ಟು ಕ್ರಿಮಿನಲ್ ಕೇಸ್ ಇದೆ ಹೇಳಿ. ಇವತ್ತು ಯಾರಾದ್ರೂ ಕಾಂಗ್ರೆಸ್ ಸೇರಬೇಕಿದ್ದರೆ ಕನಿಷ್ಠ ಐವತ್ತು ಕ್ರಿಮಿನಲ್ ಕೇಸ್ ಇರಬೇಕು ಎನ್ನುವಂಥ ಸ್ಥಿತಿ ಇದೆ. ಕಾಂಗ್ರೆಸ್ ಇವತ್ತು ಭ್ರಷ್ಟರ ಪಕ್ಷ, ಉಗ್ರರ ಪಕ್ಷ ಅನ್ನುವಂತಾಗಿದೆ.
ಇಷ್ಟಕ್ಕೂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಕೊಟ್ಟಿದ್ದೀರಿ. ಅಲ್ಪಸಂಖ್ಯಾತರಿಗೆ ಶಾದಿಭಾಗ್ಯ, ಪತ್ರಕರ್ತರಿಗೆ ಲ್ಯಾಪ್ಟಾಪ್ ಕೊಟ್ಟು ಅದರಲ್ಲೂ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ಕೊಟ್ಟಿದ್ದಿರಿ. ಆನಂತರ ವೀರಶೈವ- ಲಿಂಗಾಯತ ಸಮುದಾಯವನ್ನೂ ಒಡೆಯಲು ಮುಂದಾಗಿದ್ರಿ. ಇದರಿಂದ ಕೈಸುಟ್ಟು ಕೊಂಡಿದ್ದೀರಿ. ಹೀಗಾಗಿ ಸಿದ್ದರಾಮಯ್ಯ ಅಂದರೆ ಬ್ರಿಟಿಷರ ರೀತಿ ಒಡೆದಾಳುವ ಮನುಷ್ಯ ಅನ್ನೋದು ಸಾಬೀತಾಗಿದೆ. ಮುಂದಿನ ಬಾರಿ ಕಾಂಗ್ರೆಸ್ ಪೂರ್ತಿ ನೆಲಕಚ್ಚಲಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
Siddaramaiah licks boots of terrorist, controversial statement by Bjp Nalin Kumar Kateel. 9: “Former CM Siddaramaiah, who rose to power by begging with Nehru family, has gone mad with the dream of becoming CM again. That is why he is talking nonsense and spreading hatred in Karnataka. Siddaramaiah does not have the moral right to speak about RSS, which is building the nation,” said MP and state BJP president Nalin Kumar Kateel.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm