ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm