ಮುಂಗೈ ಶಸ್ತ್ರಚಿಕಿತ್ಸೆಗೆ ಒಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ; ಪೋಷಕರ ಪ್ರತಿಭಟನೆ, ಆಸ್ಪತ್ರೆ ವೈದ್ಯರನ್ನು ಬಂಧಿಸಿದ ಪೊಲೀಸರು ! 

31-05-22 12:05 pm       Bengalore Correspondent   ಕರ್ನಾಟಕ

ಮುಂಗೈ ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ. 

ಬೆಂಗಳೂರು, ಮೇ 31 : ಮುಂಗೈ ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ತೇಜಸ್ವಿನಿ (21) ಮೃತ ಯುವತಿ. ಬೆಂಗಳೂರಿನಲ್ಲಿ ಪಿಜಿಯಲ್ಲಿದ್ದುಕೊಂಡು ಇಂಜಿನಿಯರಿಂಗ್ ಓದುತ್ತಿದ್ದ ತೇಜಸ್ವಿನಿ ಭಾನುವಾರ ಬಾತ್ ರೂಮಿನಲ್ಲಿ ಬಿದ್ದು ಗಾಯಗೊಂಡಿದ್ದಳು. ಮುಂಗೈಗೆ ಪೆಟ್ಟಾಗಿದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮಾರತ್ ಹಳ್ಳಿಯ ಜೀವಿಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಶಸ್ತ್ರಚಿಕಿತ್ಸೆಯಾದ ಕೆಲವೇ ಗಂಟೆಗಳಲ್ಲಿ ಯುವತಿ ಮೃತಪಟ್ಟಿದ್ದು ಆಸ್ಪತ್ರೆ ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಬಂಧನಕ್ಕಾಗಿ ಗೇಟ್ ನಲ್ಲಿ ಕುಳಿತು ಧರಣಿ ನಡೆಸಿದ ಬಳಿಕ ಎಚ್ಎಎಲ್ ಠಾಣೆ ಪೊಲೀಸರು ವೈದ್ಯರ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. 

ಘಟನೆ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಮರಣೋತ್ತರ ಪರೀಕ್ಷೆಯ ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜೀವಿಕಾ ಆಸ್ಪತ್ರೆಯ ವೈದ್ಯ ಶಶಾಂಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿಯಿದೆ.

In an incident that reportedly occurred at Maarathahalli, an engineering student who had severely injured a hand in a fall underwent surgery and died a few hours after the procedure. The parents of the deceased young woman have accused doctors of medical negligence and claimed that to be the cause of their daughter’s death. The deceased student has been identified as Bagepalli resident Tejasvini (21), it is learned.