ಬ್ರೇಕಿಂಗ್ ನ್ಯೂಸ್
31-05-22 02:50 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31: ರೈತ ಸಂಘದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕಿತ್ತು ಹಾಕಲಾಗಿದೆ. ಶಿವಮೊಗ್ಗದಲ್ಲಿ ನಡೆದ ರೈತ ಸಂಘದ ತುರ್ತು ಸಭೆಯಲ್ಲಿ ಕೋಡಿಹಳ್ಳಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾ ಮಾಡಿದ್ದಲ್ಲದೆ, ಎಚ್.ಆರ್. ಬಸವರಾಜು ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಕಳೆದ ವರ್ಷ ಸಾರಿಗೆ ನೌಕರರು ತಮ್ಮ ವೇತನಕ್ಕಾಗಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದ್ದಾಗ ಅದರ ನೇತೃತ್ವವನ್ನು ಕೋಡಿಹಳ್ಳಿ ಚಂದ್ರಶೇಖರ್ ವಹಿಸಿದ್ದರು. ಸತತವಾಗಿ ಮೂರ್ನಾಲ್ಕು ದಿನ ಸಾರಿಗೆ ಮುಷ್ಕರ ನಡೆದಾಗ, ರಾಜ್ಯ ಸರಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿತ್ತು. ಈ ಸಂದರ್ಭದಲ್ಲಿ ಸರಕಾರದ ಕಡೆಯಿಂದ 35 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದು ಸಾರಿಗೆ ಮುಷ್ಕರವನ್ನು ಹಿಂತೆಗಯಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದರಲ್ಲಿ ಭಾರೀ ಪ್ರಮಾಣದ ಲಂಚವನ್ನು ಕೋಡಿಹಳ್ಳಿ ಚಂದ್ರಶೇಖರ್ ಪಡೆದಿದ್ದರು ಅನ್ನೋ ಆರೋಪ ಇತ್ತೀಚೆಗೆ ಕೇಳಿಬಂದಿತ್ತು.
ನಾಲ್ಕು ದಿನಗಳ ಹಿಂದೆ ಕೋಡಿಹಳ್ಳಿ, ತನ್ನ ವಿರುದ್ಧದ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಸ್ಪಷ್ಟನೆ ನೀಡಲು ಮುಂದಾಗಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಅಡ್ಡಹಾಕಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲಿಗರ ಮೇಲೆ ಮಸಿ ಎರಚಿ ಹೈಡ್ರಾಮಾ ನಡೆಸಿದ್ದರು. ಘಟನೆ ಸಂಬಂಧಿಸಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದರು. ಆನಂತರ, ಇದೇ ವಿಚಾರದಲ್ಲಿ ರೈತ ಸಂಘದ ಮುಖಂಡರು ಬೆಂಗಳೂರಿನ ಗಾಂಧಿ ಭವನದಲ್ಲಿ ಸೋಮವಾರ ಸಭೆ ಏರ್ಪಡಿಸಿದ್ದರು. ಸಭೆಗೆ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ ರಾಕೇಶ್ ಟಿಕಾಯತ್ ಆಗಮಿಸಿದ್ದಾಗಲೂ ಕೆಲವು ಕಾರ್ಯಕರ್ತರು ಮೋದಿ ಮೋದಿ ಹೆಸರು ಕೂಗುತ್ತಾ ಟಿಕಾಯತ್ ಮೇಲೆ ಮಸಿ ಎರಚಿದ್ದರು.
ಇದೀಗ ಕೋಡಿಹಳ್ಳಿ ಚಂದ್ರಶೇಖರ್ 35 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪವನ್ನು ರೈತ ಸಂಘದ ಸದಸ್ಯರು ಗಂಭೀರವಾಗಿ ಪರಿಗಣಿಸಿದ್ದು, ಅವರನ್ನು ರೈತ ಸಂಘದಿಂದ ವಜಾ ಮಾಡಿದ್ದಲ್ಲದೆ, ಅವರ ಫೋಟೋವನ್ನು ರೈತರ ಸಭೆಗಳಲ್ಲಿ ಬಳಸಬಾರದೆಂದು ನಿರ್ಧರಿಸಿದ್ದಾರೆ. ನಂಜುಂಡಸ್ವಾಮಿ ಇನ್ನಿತರ ಹಳೆ ಮುಖಂಡರ ಚಿತ್ರಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ.
Kodihalli Chandrashekar scam in protest, suspended from farmers association. Condemning the alleged dealings by farmers’ leader Kodihalli Chandrashekar in the name of farmers, a faction of the Karnataka Rajya Raitha Sangha (KRRS) led by Badagalapura Nagendra staged a demonstration in Mysuru on Saturday seeking a probe into the reported dealings by Mr. Chandashekar as brought out in a sting operation by a television channel.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm