ಬ್ರೇಕಿಂಗ್ ನ್ಯೂಸ್
01-06-22 01:12 pm HK News Desk ಕರ್ನಾಟಕ
ಮಡಿಕೇರಿ, ಜೂನ್ 1 : ಕಾಡಾನೆ ಹಿಡಿಯಲೆಂದು ಅರಣ್ಯಾಧಿಕಾರಿಗಳು ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದು ಓವರ್ ಡೋಸ್ ಆಗಿ 16 ವರ್ಷದ ಹೆಣ್ಣಾನೆ ದುರಂತ ಸಾವು ಕಂಡ ಘಟನೆ ಇಲ್ಲಿನ ಚೆಯ್ಯಂಬಾಣೆ ಅರಣ್ಯ ವಲಯದಲ್ಲಿ ನಡೆದಿದೆ.
ಚೆಯ್ಯಂಡಾಣೆ ಸಮೀಪದ ಮರಂದೋಡು ಎಂಬಲ್ಲಿ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಂದೋಡು ಗ್ರಾಮದ ವಿಜಯ್ ನಂಜಪ್ಪ ಅವರ ಕಾಫಿ ತೋಟದಲ್ಲಿ ಕಾಡಾನೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗಿತ್ತು.
ದಾಂಧಲೆ ಮಾಡುತ್ತಿದ್ದ ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರದ ಅನುಮತಿ ಪಡೆದು ಮೂರು ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗಿತ್ತು. ಅತ್ತಿತ್ತ ಓಡುತ್ತಿದ್ದ ಆನೆಗೆ ಮೂರು ಸಾಕಾನೆಗಳ ಮೂಲಕ ಅರಿವಳಿಕೆ ಇಂಜೆಕ್ಷನ್ ನೀಡಿದ್ದು ಸ್ವಲ್ಪ ದೂರಕ್ಕೆ ಓಡಿ ಪ್ರಜ್ಞೆ ತಪ್ಪಿ ಬಿದ್ದಿತ್ತು. ಬಳಿಕ ಹಗ್ಗದಿಂದ ಕಟ್ಟಿ ಆನೆಯನ್ನು ಎತ್ತಿ ಲಾರಿಗೆ ಹಾಕಲು ಯತ್ನಿಸುತ್ತಿದ್ದಾಗ ಕುಸಿದು ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯರು ಚಿಕಿತ್ಸೆ ನೀಡಲು ಪರದಾಡಿದರೂ, ಸಾಧ್ಯವಾಗಲಿಲ್ಲ. ಅರಿವಳಿಕೆ ಚುಚ್ಚುಮದ್ದು ಓವರ್ ಡೋಸ್ ಆಗಿ ಹೃದಯಾಘಾತ ಆಗಿದೆ ಎನ್ನಲಾಗುತ್ತಿದೆ. ಆನೆಗೆ ಹೈಡೋಸ್ ಕೊಟ್ಟು ಅರಣ್ಯ ಇಲಾಖೆ ಅಧಿಕಾರಿಗಳೇ ಸಾಯಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಾಡಾನೆ ಹಾವಳಿ ಹೆಚ್ಚಿದ್ದರಿಂದ ಒಂದು ವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ನಡೆಸುತ್ತಿದ್ದರು. ಈ ಕುರಿತು ಮಾಧ್ಯಮಕ್ಕೆ ಮಾತನಾಡಿದ ಡಿಎಫ್ಓ ಚಕ್ರಪಾಣಿ, ಆರಂಭದಲ್ಲಿ ಕಾಡಾನೆ ಸೆರೆಗಾಗಿ ಅರಿವಳಿಕೆ ನೀಡಲಾಗಿತ್ತು. ಆಬಳಿಕವೂ ಆನೆ ಓಡಾಡುತ್ತಿತ್ತು, ಆದರೆ ಅದನ್ನು ಹಿಡಿದು ತರುವ ಸಂದರ್ಭ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಓವರ್ ಡೋಸ್ ಆಗಿದೆಯಾ ಅನ್ನೋದೂ ತಿಳಿದುಬರುತ್ತದೆ ಎಂದು ಹೇಳಿದರು.
A wild elephant was killed during a capture mission undertaken by the forest department. The incident was reported at Marandoda village limits in Virajpet taluk of Kodagu. The dead elephant is a female, aged approximately 35 years. The elephant capture mission started at Marandoda near Cheyandane on Tuesday morning. Five tamed elephants alongside the forest staff took to the capture mission and the identified 35-year-old female elephant was separated from the herd and was tranquilized by veterinary Doctor Ramesh.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm