ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.
ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm