ಬ್ರೇಕಿಂಗ್ ನ್ಯೂಸ್
03-06-22 11:32 am HK News Desk ಕರ್ನಾಟಕ
ಕಲಬುರಗಿ, ಜೂನ್ 3 : ಖಾಸಗಿ ಬಸ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದು ಬೆಂಕಿಗಾಹುತಿಯಾಗಿದ್ದು ಇಬ್ಬರು ಮಕ್ಕಳು ಸೇರಿ ಏಳು ಜನ ಸಜೀವ ದಹನವಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಸುಕಿನ ಜಾವ ಗೋವಾದಿಂದ ಹೈದರಾಬಾದ್ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬೀಳುತ್ತಲೇ ಬೆಂಕಿ ಹೊತ್ತಿಕೊಂಡಿದೆ. ಅಡ್ಡಲಾಗಿ ಬಿದ್ದ ಬಸ್ಸಿನಲ್ಲಿ ನಿದ್ದೆಯ ಮಂಪರಿನಲ್ಲಿದ್ದವರು ಏನಾಗುತ್ತಿದೆ ಎಂದು ನೋಡುವಷ್ಟರಲ್ಲಿ ಬೆಂಕಿ ಉಂಟಾಗಿತ್ತು.

ತೆಲಂಗಾಣದ ಹೈದರಬಾದ್ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸ ತೆರಳಿದ್ದರು. ಅಲ್ಲಿಂದ ಗುರುವಾರ ರಾತ್ರಿ ಹೊರಟಿದ್ದು ಕಲಬುರಗಿ ಮೂಲಕ ಹೈದರಾಬಾದ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 22 ಮಂದಿ ಬಸ್ಸಿನಿಂದ ಹೊರ ಬಂದಿದ್ದು ಅರೆಬರೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು, ದಂಪತಿ ಸೇರಿದ್ದಾರೆ.
ಬಸ್ ಪೂರ್ತಿಯಾಗಿ ಸುಟ್ಟು ಹೋಗಿದ್ದು ಸಂಪೂರ್ಣ ಕರಕಲಾಗಿದೆ. ಟೆಂಪೋ ಕೂಡ ಇನ್ನೊಂದು ಕಡೆಗೆ ಉರುಳಿದ್ದು ಚಾಲಕನ ಎರಡೂ ಕಾಲುಗಳು ತುಂಡಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
Bus catches fire and falls into pit after tempo rams at Kalaburgi, seven killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm