RSS ತಂಟೆಗೆ ಬರಬೇಡಿ, ಚಡ್ಡಿಗೆ ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ ; ಸಿದ್ದುಗೆ  ಖಡಕ್ ವಾರ್ನಿಂಗ್ ಕೊಟ್ಟ ಈಶ್ವರಪ್ಪ 

04-06-22 07:13 pm       Bengalore Correspondent   ಕರ್ನಾಟಕ

ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ.

ಬೆಂಗಳೂರು, ಜೂ 04: ಸಿದ್ದರಾಮಯ್ಯ ಅವರೇ, ಚಡ್ಡಿಗೆ ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ. ಆರ್‌ಎಸ್‌ಎಸ್‌ ತಂಟೆಗೆ ಬರಬೇಡಿ’ ಎಂದು ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ... ಲಂಕೆಯೇ ಸುಟ್ಟು ಹೋಯಿತು. ಕಾಂಗ್ರೆಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ, ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ ಒಂದೇ ಬಾಕಿ ಇದೆ. ಆ ಕೆಲಸ ನಿಮಗಿಂತ ಚೆನ್ನಾಗಿ ಇನ್ಯಾರು ಮಾಡಲು ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

ಏನು ಹೇಳಿಕೆ ಕೊಟ್ಟಿದ್ದರು ಸಿದ್ದರಾಮಯ್ಯ?

ಆರ್‌,ಎಸ್.ಎಸ್‌ ನವರು ಹಿಂದೆ ಚಡ್ಡಿ ಹಾಕುತ್ತಿದ್ದರು, ಈಗ ಪ್ಯಾಂಟ್‌ ಹಾಕುತ್ತಿದ್ದಾರೆ. ನಮ್ಮವರು ಪ್ರತಿಭಟನೆ ಸಂದರ್ಭದಲ್ಲಿ ಸಾಂಕೇತಿಕವಾಗಿ ಒಂದೇ ಒಂದು ಚಡ್ಡಿ ಸುಟ್ಟು ಹಾಕಿದ್ದಾರೆ. ಅದು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ದೊಡ್ಡ ಅಪರಾಧವಾಗಿ ಕಂಡಿದೆ. ಇವರೇನು ಮನೆಗೆ ಬೆಂಕಿ ಹಚ್ಚುವ ಅಥವಾ ಬೆಂಕಿಯನ್ನು ಸಮಾಜ ವಿರೋಧಿ ಕೆಲಸಕ್ಕೆ ಬಳಸಿಲ್ಲ.

What's the criteria to be a Hindu, Siddaramaiah asks RSS | Deccan Herald

ಇದು ಕಾನೂನು ವಿರೋಧಿ ಕೃತ್ಯ ಹೇಗಾಗುತ್ತದೆ? ಕಾನೂನು ಉಲ್ಲಂಘನೆಗಾಗಿ ಗುಂಪುಗೂಡಿರುವುದು ಹೇಗಾಗುತ್ತೆ? ಒಬ್ಬರೇ ಪ್ರತಿಭಟನೆ ಮಾಡೋಕಾಗುತ್ತಾ? ಇವರು ಕಾಂಪೌಂಡ್‌ ಗೇಟ್‌ ನ ಒಳಗಡೆ ಪ್ರವೇಶಿಸಿದ್ದಾರೆ, ಮನೆಗೆ ಪ್ರವೇಶ ಮಾಡಿಲ್ಲ. ಆಗ ಪೊಲೀಸರು ಏನು ಮಾಡುತ್ತಿದ್ದರು? ತಡೆಯಬೇಕಿತ್ತು ಅಲ್ವ?

ಈಶ್ವರಪ್ಪ 144 ಸೆಕ್ಷನ್‌ ಹಾಕಿದಾಗ ಮೆರವಣಿಗೆ ಮಾಡಿದ್ದು ಕಾನೂನು ಉಲ್ಲಂಘನೆ ಅಲ್ಲವೇ? ಜನರಲ್ಲಿ ದ್ವೇಷ ಭಾವನೆ ಹುಟ್ಟು ಹಾಕುವ ಕೆಲಸ ಮಾಡಿದ ಈಶ್ವರಪ್ಪ ಅವರ ಮೇಲೆ ಗೃಹ ಸಚಿವರು ಏನು ಕ್ರಮ ಕೈಗೊಂಡಿದ್ದಾರೆ? ಅವರೂ ಶಿವಮೊಗ್ಗ ಜಿಲ್ಲೆಯವರೇ ಅಲ್ವಾ? ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧನ ಮಾಡಿಲ್ಲ ಎಂದರೆ ರಾಜ್ಯಾದ್ಯಂತ ಚಡ್ಡಿಗೆ ಬೆಂಕಿ ಹಾಕುವ ಪ್ರತಿಭಟನೆ ಮಾಡಲಾಗುವುದು ಎಂದಿದ್ದರು.

ರಾವಣ ಹನುಮನ ಬಾಲಕ್ಕೆ ಬೆಂಕಿ ಹಚ್ಚಿದ…. ಲಂಕೆಯೇ ಸುಟ್ಟು ಹೋಯಿತು ….. ಕಾಂಗ್ರೇಸ್ ಪಕ್ಷವನ್ನು ಚಟ್ಟದಲ್ಲಿಟ್ಟಾಗಿದೆ ಇನ್ನು ಬೆಂಕಿ ಹಚ್ಚುವುದೊಂದೇ ಕೆಲಸ … ಆ ಕೆಲಸ ನಿಮಗಿಂತ ಚನ್ನಾಗಿ ಇನ್ಯಾರು ಮಾಡಲು ಸಾಧ್ಯ …. ಚಡ್ಜಿಗೆ ನೀವು ಬೆಂಕಿ ಹಚ್ಜಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗುತ್ತದೆ RSS ತಂಟೆಗೆ ಬರಬೇಡಿ…ಹುಷಾರ್#siddaramaiah

— K S Eshwarappa (@ikseshwarappa) June 4, 2022

Dont buzz about RSS, your chaddi will be on fire, warns Eshwarappa to Siddaramaiah.Targeting the Rashtriya Swayamsevak Sangh, senior Karnataka Congress leader Siddaramaiah on Friday questioned whether those who belonged to the outfit were "native Indians", "Dravidians" or "Aryans"