ಬ್ರೇಕಿಂಗ್ ನ್ಯೂಸ್
04-06-22 08:14 pm HK News Desk ಕರ್ನಾಟಕ
ಬೆಂಗಳೂರು, ಜೂ 04: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್ಎಸ್ಎಸ್ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್ಎಸ್ಎಸ್ ಬಿಟ್ಟಿಲ್ಲ. ಆರ್ಎಸ್ಎಸ್ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್ಎಸ್ಎಸ್ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್ಎಸ್ಎಸ್ಸ್ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು.

ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.
We will burn chaddis all over the state taunts Nalpad how many members can you arrest let's see challenges BJP government in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm