ಬ್ರೇಕಿಂಗ್ ನ್ಯೂಸ್
04-06-22 08:14 pm HK News Desk ಕರ್ನಾಟಕ
ಬೆಂಗಳೂರು, ಜೂ 04: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್ಎಸ್ಎಸ್ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್ಎಸ್ಎಸ್ ಬಿಟ್ಟಿಲ್ಲ. ಆರ್ಎಸ್ಎಸ್ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್ಎಸ್ಎಸ್ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್ಎಸ್ಎಸ್ಸ್ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು.

ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.
We will burn chaddis all over the state taunts Nalpad how many members can you arrest let's see challenges BJP government in Bengaluru.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm