ಬ್ರೇಕಿಂಗ್ ನ್ಯೂಸ್
04-06-22 08:14 pm HK News Desk ಕರ್ನಾಟಕ
ಬೆಂಗಳೂರು, ಜೂ 04: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್ಎಸ್ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್ಎಸ್ಎಸ್ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್ಎಸ್ಎಸ್ ಬಿಟ್ಟಿಲ್ಲ. ಆರ್ಎಸ್ಎಸ್ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್ಎಸ್ಎಸ್ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್ಎಸ್ಎಸ್ಸ್ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು.

ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.
We will burn chaddis all over the state taunts Nalpad how many members can you arrest let's see challenges BJP government in Bengaluru.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm