ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm