ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
10-03-26 01:31 pm
HK News Staffer
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm